ಸಿದ್ಧಾರ್ಥ ನಗರದ ಸುತ್ತ

  • IndiaGlitz, [Tuesday,July 01 2014]

ಡಾಕ್ಟರ್ ರಾಜಕುಮಾರ್ ಕುಟುಂಬದಿಂದ ನಾಲ್ಕನೇ ಕುಡಿ (ಸಿಂಗನಲ್ಲೂರು ಪುಟ್ಟಸ್ವಾಮಯ್ಯ, ಡಾಕ್ಟರ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್) ವಿನಯ್ ರಾಜಕುಮಾರ್ ಅವರ ಪ್ರಥಮ ಚಿತ್ರ ನಗರದ ಸುತ್ತ ಮುತ್ತ ಭರದಿಂದ ಚಿತ್ರೀಕರಣ ಮಾಡುತ್ತಿದೆ.

ಪೂರ್ಣಿಮಾಎಂಟರ್ ಪ್ರೈಸಸ್ ಲಾಂಛನದಡಿಯಲ್ಲಿಡಾ ರಾಜ್ ಕುಮಾರ್ ಅರ್ಪಿಸಿ ಶ್ರೀಮತಿ ಪಾರ್ವತಮ್ಮರಾಜ್ ಕುಮಾರ್ ನಿರ್ಮಿಸುತ್ತಿರುವ ಸಿದ್ಧಾರ್ಥ ಚಿತ್ರಕ್ಕಾಗಿ ನವನಟ ವಿನಯ್, ಅಪೂರ್ವಆರೋರ, ಅಶ್ವಿನಿ ಗೌಡ, ಸಾಧುಕೋಕಿಲ ಮುಂತಾದವರು ಭಾಗವಹಿಸಿದ ಹಲವಾರು ಸನ್ನಿವೇಶಗಳನ್ನು ಹಾಗೂ ಮೈನವಿರೇಳಿಸುವ ಹೊಡೆದಾಟದ ದೃಶ್ಯವೊಂದನ್ನು ರವಿವರ್ಮ ಸಾಹಸ ನಿರ್ದೇಶನದೊಂದಿಗೆ ಕೃಷ್ಣಕುಮಾರ್ ಛಾಯಾಗ್ರಹಣದಲ್ಲಿ ಹೆಸರಘಟ್ಟ ಬಳಿಯಿರುವ ಆಚಾರ್ಯ ಕಾಲೇಜ್ ನಲ್ಲಿ ನಿರ್ದೇಶಕ ಪ್ರಕಾಶ್ ಜಯರಾಂ ಚಿತ್ರಿಸಿಕೊಂಡರು.

ಚಿತ್ರಕ್ಕೆರಘು ಸಮರ್ಥ ಸಂಭಾಷಣೆ, ಸಾಹಿತ್ಯ ಜಯಂತ್ ಕಾಯ್ಕಿಣಿ, ಎಂ.ವಿ. ಕೃಷ್ಣಕುಮಾರ್ ಛಾಯಾಗ್ರಹಣ, ವಿ.ಹರಿಕೃಷ್ಣ ಸಂಗೀತ, ಮೋಹನ್ ಪಂಡಿತ್ ಕಲೆ, ಸಚಿನ್ ಸಂಕಲನ ರವಿವರ್ಮ ಸಾಹಸ, ಚೆನ್ನ ನಿರ್ಮಾಣ ಮೇಲ್ವಿಚಾರಣೆ, ಮಲ್ಲಿಕಾರ್ಜುನ ನಿರ್ಮಾಣ ನಿರ್ವಹಣೆಅನಂತಮೂರ್ತಿ ನಿರ್ದೇಶನ ಸಹಕಾರವಿದ್ದು, ಚಿತ್ರಕಥೆ ಮತ್ತು ನಿರ್ದೇಶನ ಪ್ರಕಾಶ್ ಜಯರಾಂ.

ಚಿತ್ರದ ಮೂಲಕ ರಾಘವೇಂದ್ರರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನಾಯಕ ನಟನಾಗಿಚಿತ್ರರಂಗ ಪ್ರವೇಶಿಸುತ್ತಿದ್ದು, ಡಾ ರಾಜ್ ಕುಟುಂಬದ ಮೂರನೇತಲೆಮಾರಿನ ನಾಯಕಇವರಾಗಲಿದ್ದು,ಇವರೊಂದಿಗೆಅಪೂರ್ವಆರೋರ, ಆಶಿಷ್ ವಿದ್ಯಾರ್ಥಿ, ಅಶ್ವಿನಿಗೌಡ, ಅಚ್ಯುತಕುಮಾರ್, ಸಾಧುಕೋಕಿಲ, ನಿಕ್ಕಿ,ಗುರುನಂದನ್, ನಯನ, ದೀಪಿಕಾ, ಉಮೇಶ್, ಅಲೋಕ್, ಜೀವನ್, ವಿನೋದ್, ಮಣಿಶೆಟ್ಟಿ ಮುಂತಾದವರು ಉಳಿದ ತಾರಾ ಬಳಗದಲ್ಲಿದ್ದಾರೆ.